ತರಕಾರಿ ಟಿಪ್ಸ್:
ತರಕಾರಿ ಕೊಳ್ಳಲು ಮತ್ತು ಅದನ್ನು ಸಂಗ್ರಹಿಸಲು ಹೆಚ್ಚು ಮಹತ್ವ ಕೊಡಬೇಕು. ಇಲ್ಲಿ ಕೆಲವು ಅಂಶಗಳನ್ನು ತಿಳಿಸಿರುವೆ. ಅನುಕೂಲವಾದರೆ ಸಂತೋಷ.
ತರಕಾರಿಗಳನ್ನು ಕೊಳ್ಳುವಾಗ ಯಾವಾಗಲೂ ಗಮನ ಹರಿಸಬೇಕು, ತುಂಬಾ ಬಲಿತಿರುವ ತರಕಾರಿಗಳನ್ನು ಕೊಂಡುಕೊಳ್ಳಬೇಡಿ, ಅದರಲ್ಲಿರಬೇಕಾದ ವಿಟಮಿನ್ಸ್,ಪ್ರೋಟಿನ್ಸ್ ಮತ್ತು ಇತರೆ ಸತ್ವಗಳು ಬಲಿತ ಕಾಯಿಯಲ್ಲಿ ಕಡಿಮೆ ಇರುತ್ತದೆ, ಕೆಲವೊಂದರಲ್ಲಿ ಇರುವುದೇ ಇಲ್ಲ. ಆದ್ದರಿಂದ ಅದನ್ನು ತಿಂದು ಪ್ರಯೋಜನವೂ ಆಗುವುದಿಲ್ಲ. ಬೇಯಿಸುವುದು ಕಷ್ಟ ಮತ್ತು ಬೇಯಲು ಬಹಳ ಸಮಯ ಕೂಡ ತೆಗೆದುಕೊಳ್ಳುತ್ತದೆ. ಆಗಾಗಿ ಎಳೆಯ ಮತ್ತು ಮಧ್ಯಮ ರೀತಿಯ ಹಾಗೂ ತಾಜಾ ಆಗಿರುವ ತರಕಾರಿಗಳನ್ನು ಮಾತ್ರ ತೆಗೆದುಕೊಂಡು ಉಪಯೋಗಿಸಿ, ಕೆಲವು ತರಕಾರಿಗಳು ಅಂಗಡಿಯಿಂದ ತಂದ ಎರಡು-ಮೂರು ದಿನಗಳ ಹಂತರದಲ್ಲಿ ಉಪಯೋಗಿಸಿ, ಕೆಲವು ಸುಮಾರು ದಿನ ತಾಜಾ ಆಗಿರುತ್ತದೆ, ಕೆಲವು ತಂದಾಗ ಎಷ್ಟೇ ಫ್ರೆಶ್ ಇದ್ದರೂ ಸಹ ಬೇಗ ಬಲಿಯುತ್ತವೆ ಮತ್ತು ಒಣಗಿದಂತಾಗುತ್ತದೆ. ಫ್ರಿಡ್ಜ್ ನಲ್ಲಿ ಇಟ್ಟರು ಸಹ ಕೆಲವೊಂದು ಬೇಗ ಹಾಳಾಗುತ್ತವೆ.
ತರಕಾರಿಗಳನ್ನು ಪೇಪರ್ ನಲ್ಲಿ ಸುತ್ತಿಟ್ಟು ಕವರ್ ನಲ್ಲಿ ಇಡಿ, ಕವರ್ ನಲ್ಲಿ ಇಟ್ಟಾಗ ನೀರಿನ ಅಂಶ ಹೀರಿಕೊಂಡು ಬಹಳ ದಿನ ತರಕಾರಿ ಇರುತ್ತದೆ, ಬೇಗ ಹಾಳಾಗುವುದಿಲ್ಲ. ಪ್ಲಾಸ್ಟಿಕ್ ಕವರ್ ಗಿಂತ, ಪೇಪರ್ ಕವರ್ ನಲ್ಲಿ ಇಟ್ಟರೆ ತುಂಬಾ ಒಳ್ಳೆಯದು. ತರಕಾರಿ ಚೆನ್ನಾಗಿರುತ್ತದೆ.
ಆ ಭಗವಂತನಿಂದ ನಮಗೆ ದೈವದತ್ತವಾಗಿ ಬಂದಿರುವ ಈ ಸೃಷ್ಟಿಯಲ್ಲಿ ಅನೇಕ ಗಿಡಮೂಲಿಕೆಗಳಿವೆ. ಪ್ರಕೃತಿಯಲ್ಲಿ ಕೆಲವಂತೂ ತುಂಬಾ ಉಪಯುಕ್ತವಾದವು. ಗಿಡ,ಮರ,ಬೇರು,ಚೆಕ್ಕೆ,ಎಲೆ,ಹೂವು,ಕಾಯಿ,ಹಣ್ಣುಗಳು ಮತ್ತು ತರಕಾರಿಗಳು ಹಾಗೂ ಕಾಳುಗಳು,ನಮ್ಮ ನಿತ್ಯ ಜೀವನದಲ್ಲಿ ಬಹಳವಾಗಿ ಬಳಸುತ್ತೇವೆ.ಅವುಗಳಲ್ಲಿ ಕೆಲವನ್ನೂ ಉಪಯೋಗಿಸುವ ರೀತಿ ಮತ್ತು ಮನೆಮದ್ದು ಮಾಡಿಕೊಂಡು ಅವೆಲ್ಲವನ್ನು ಸದುಪಯೋಗ ಮಾಡಿಕೊಳ್ಳುವ ಬಗ್ಗೆ ತಿಳಿಯೋಣ.ಉಪಯುಕ್ತ ಮಾಹಿತಿ ಮತ್ತು ಮನೆಮದ್ದು ತಯಾರಿಸುವ ಈ ಸಿರಿಗಂಧ ಟಿಪ್ಸ್ ಬ್ಲಾಗ್ ಗೆ ಸುಸ್ವಾಗತ.
Showing posts with label ತರಕಾರಿ ಟಿಪ್ಸ್:Vegetable Tips. Show all posts
Showing posts with label ತರಕಾರಿ ಟಿಪ್ಸ್:Vegetable Tips. Show all posts
Subscribe to:
Posts (Atom)


